ಹೀಗಿರಲು ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ ಹೇಳುವುದೇನೆಂದರೆ: “ಸಿಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರು ನಿಮಗೆ ಮಾಡಿದಂತೆ ಅಸ್ಸೀರಿಯದವರು ನಿಮ್ಮನ್ನು ಬಡಿಗೆಯಿಂದ ಹೊಡೆದು, ನಿಮಗೆ ವಿರುದ್ಧ ದೊಣ್ಣೆಯನ್ನು ಎತ್ತುವಾಗ ಅವರಿಗೆ ಹೆದರಬೇಡಿ;