ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಲೋಕದವರಿಗೆ ಪಾಪದ ಫಲವನ್ನೂ ದುರುಳರಿಗೆ ದುಷ್ಕೃತ್ಯಗಳ ಫಸಲನ್ನೂ ತಿನ್ನಿಸುವೆನು. ಸೊಕ್ಕಿದವನ ಕೊಬ್ಬನ್ನು ಕರಗಿಸುವೆನು. ಬಲಾತ್ಕಾರ ಮಾಡುವವರ ಹೆಮ್ಮೆಯನ್ನು ಅಡಗಿಸುವೆನು.