ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನೀವು ನಿಶ್ಚಯವಾಗಿಯೂ ಈ ಜನರನ್ನು ಹಾಗೂ ಜೆರುಸಲೇಮಿನವರನ್ನು ಮೋಸಗೊಳಿಸಿದ್ದೀರಿ. ‘ನಿಮಗೆ ಸಮಾಧಾನವಾಗುವುದು’ ಎಂದು ಅವರಿಗೆ ಹೇಳಿದಿರಿ, ಆದರೆ ಕತ್ತಿ ಅವರ ಕುತ್ತಿಗೆಗೆ ಬಂದಿದೆ” ಎಂದೆನು.