ಆಗ ನೀನು ಅವರಿಗೆ ಹೀಗೆಂದು ಹೇಳಬೇಕು : ಸರ್ವೇಶ್ವರನ ಈ ಮಾತಿಗೆ ಕಿವಿಗೊಡಿ : ‘ನಿಮ್ಮ ಪೂರ್ವಜರು ನನ್ನನ್ನು ತೊರೆದುಬಿಟ್ಟರು. ಅನ್ಯದೇವತೆಗಳನ್ನು ಹಿಂಬಾಲಿಸಿದರು. ಅವುಗಳಿಗೆ ಸೇವೆಸಲ್ಲಿಸಿ ಪೂಜಿಸಿದರು. ನನ್ನನ್ನು ಬಿಟ್ಟುದಲ್ಲದೆ ನನ್ನ ಧರ್ಮವಿಧಿಗಳನ್ನು ಮೀರಿದರು.