ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.