ಸರ್ವೇಶ್ವರ ಹೀಗೆನ್ನುತ್ತಾರೆ: “ನಿಲ್ಲಿಸು ನಿನ್ನ ಗೋಳಾಟವನ್ನು ಒರಸು ನಿನ್ನ ಕಣ್ಗಳಿಂದ ನೀರನ್ನು. ನಿನ್ನ ಪ್ರಯಾಸ ಸಾರ್ಥಕವಾಗುವುದು ಶತ್ರುವಿನ ದೇಶದಿಂದ ನಿನ್ನ ಮಕ್ಕಳು ಹಿಂದಿರುಗುವರು. ಸರ್ವೇಶ್ವರನಾದ ನನ್ನ ನುಡಿ ಇದು.”