ಸರ್ವೇಶ್ವರನ ಈ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗ ಹನಮೇಲನು ಕಾರಾಗೃಹದ ಅಂಗಳದಲ್ಲಿ ಇದ್ದ ನನ್ನ ಬಳಿಗೆ ಬಂದು, ‘ಬೆನ್ಯಾಮೀನ್ ನಾಡಿನ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ. ಅದಕ್ಕೆ ನೀನೆ ಬಾಧ್ಯನು, ನಿನಗಾಗಿಯೇ ಕೊಂಡುಕೊ’ ಎಂದು ಕೇಳಿಕೊಂಡನು. ಕೂಡಲೆ ಇದು ಸರ್ವೇಶ್ವರನ ನುಡಿ ಎಂದು ನನಗೆ ಗೊತ್ತಾಯಿತು.
Go to Home Page