ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.
Go to Home Page