ಆಗ ಅರಸ ಚಿದ್ಕೀಯನು ಅಂತೆಯೆ ಅಪ್ಪಣೆಕೊಡಲು, ಯೆರೆಮೀಯನನ್ನು ರಾಜ್ಯದ ಕಾರಾಗೃಹದ ಅಂಗಳಕ್ಕೆ ಸ್ಥಳಾಂತರಿಸಲಾಯಿತು. ರೊಟ್ಟಿ ಮಾರುಕಟ್ಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದುಕೊಡುತ್ತಿದ್ದರು. ನಗರದ ರೊಟ್ಟಿಯೆಲ್ಲ ತೀರುವ ತನಕ ಹಾಗೆ ಮಾಡುತ್ತಿದ್ದರು. ಯೆರೆಮೀಯನು ರಾಜ್ಯದ ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.
Go to Home Page