ಆಗ ಯೆರೆಮೀಯನು, “ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲರ ದೇವರೂ ಆದ ಸ್ವಾಮಿ ಹೀಗೆನ್ನುತ್ತಾರೆ: ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳ ಮೊರೆಹೊಕ್ಕರೆ ತಮ್ಮ ಪ್ರಾಣ ಉಳಿಯುವುದು. ಈ ನಗರ ಬೆಂಕಿ ಇಂದ ಸುಟ್ಟುಹೋಗದು, ತಾವೂ ತಮ್ಮ ಮನೆಯವರೂ ಮನೆತನದವರೂ ಬದುಕುವಿರಿ.