ಬಾಬಿಲೋನಿಯದ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ನಾಡಿನ ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆಂಬ ಸುದ್ದಿ ಹಾಗು ಬಾಬಿಲೋನಿಗೆ ಸೆರೆಹೋಗದ ನಾಡಿಗರಲ್ಲಿ ಬಡವರಾದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿ ಹರಡಿತು. ಕಾಡುಮೇಡುಗಳಲ್ಲಿದ್ದ ಎಲ್ಲ ಯಹೂದ್ಯ ಸೈನಿಕರೂ ಸೇನಾಪತಿಗಳೂ ಇದನ್ನು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.
Go to Home Page