ಆಗ ಕಾರೇಹನ ಮಗ ಯೋಹಾನಾನನು ಮಿಚ್ಪದಲ್ಲಿದ್ದ ಗೆದಲ್ಯನಿಗೆ, “ನಾನು ಹೋಗಿ ನೆತನ್ಯನ ಮಗ ಇಷ್ಮಾಯೇಲನನ್ನು ಕೊಲ್ಲಲು ಅಪ್ಪಣೆಯಾಗಬೇಕು. ಇದು ನಿಮ್ಮ ಅಪ್ಪಣೆಯೆಂದು ಯಾರಿಗೂ ತಿಳಿದುಬರುವುದಿಲ್ಲ. ಅವನು ನಿಮ್ಮನ್ನು ಕೊಂದರೆ ನಿಮ್ಮ ಆಶ್ರಯದ ಯೆಹೂದ್ಯರೆಲ್ಲರು ದಿಕ್ಕಾಪಾಲಾಗಿ ಜುದೇಯದ ಶೇಷವೂ ನಿಶ್ಶೇಷವಾಗುವುದು. ಹೀಗೆ ಆಗುವುದು ಸರಿಯೇ?” ಎಂದು ಗುಟ್ಟಾಗಿ ವಿನಂತಿಸಿದನು.
Go to Home Page