ಇಂತಿರಲು ಗಡ್ಡ ಬೋಳಿಸಿ, ಬಟ್ಟೆ ಹರಿದು, ಗಾಯಮಾಡಿಕೊಂಡಿದ್ದ ಎಂಬತ್ತು ಜನರು ಶೆಕೆಮ್, ಶಿಲೋ, ಸಮಾರಿಯ ಎಂಬ ಊರುಗಳಿಂದ ಬಂದು, ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋಗುತ್ತಿದ್ದರು.