ಅಲ್ಲಿನವರು ತಮಗೂ ನಿಮಗೂ ಮತ್ತು ನಿಮ್ಮ ಪೂರ್ವಜರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ಪೂಜಿಸುವುದಕ್ಕೆ ತವಕಪಟ್ಟರು. ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದರು. ಆದ್ದರಿಂದಲೇ ಆ ಸ್ಥಳಗಳು ಹಾಳಾದವು, ನಿರ್ಜನಪ್ರದೇಶಗಳಾದವು.