ಇದಲ್ಲದೆ ಯೆರೆಮೀಯನು ಆ ಎಲ್ಲ ಜನರಿಗೆ ಮುಖ್ಯವಾಗಿ ಮಹಿಳೆಯರಿಗೆ, ಹೀಗೆ ಹೇಳಿದನು: “ಈಜಿಪ್ಟಿನಲ್ಲಿರುವ ಯೆಹೂದ್ಯರೇ, ನಿಮ್ಮೆಲ್ಲರಿಗೆ ಸರ್ವೇಶ್ವರ ಹೀಗೆನ್ನುತ್ತಾರೆ - ‘ಗಗನದೊಡತಿಗೆ ಧೂಪಾರತಿ ಎತ್ತಿ ಪಾನನೈವೇದ್ಯವನ್ನು ಸುರಿಯುತ್ತೇವೆ. ಅದಕ್ಕಾಗಿ ಮಾಡಿಕೊಂಡ ಹರಕೆಯನ್ನು ಖಂಡಿತವಾಗಿ ತೀರಿಸುತ್ತೇವೆ ಎಂಬುದಾಗಿ ನೀವೂ ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿದ್ದೀರಿ, ಕೈಯಿಂದ ನೆರವೇರಿಸಿದ್ದೀರಿ! ಸರಿಸರಿ, ನಿಮ್ಮ ಹರಕೆಗಳನ್ನು ತೀರಿಸಿರಿ, ಅವುಗಳನ್ನು ಬಿಡದೆ ನೆರವೇರಿಸಿರಿ!
Go to Home Page