ಅಯ್ಯಯ್ಯೋ, ಸ್ವಾಮಿಯೆ ಸಿಟ್ಟುಗೊಂಡಿರುವನಲ್ಲಾ ! ಸಿಯೋನ್ ಕುವರಿಗೆ ಕಾರ್ಮೋಡ ಕವಿದಂತೆ ಮಾಡಿರುವನಲ್ಲಾ ! ಇಸ್ರಯೇಲಿನ ವೈಭವವನ್ನು ಆಗಸದಿಂದ ನೆಲಕ್ಕೆಸೆದುಬಿಟ್ಟಿರುವನಲ್ಲಾ ! ಆ ಸಿಟ್ಟಿನ ದಿನದಂದು ತನ್ನ ಪಾದಪೀಠವಾದ ದೇವಾಲಯವನ್ನೂ ನೆನೆಯದೆಹೋದನಲ್ಲಾ !