“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿ ವಂಶದವರು; ಅವರ ಬಿರುನುಡಿಗೆ ದಿಗಿಲು ಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.