ಆಮೇಲೆ ದೇವರಾತ್ಮ ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಸರ್ವೇಶ್ವರನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು. ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು. ಅವರ ಮಧ್ಯೆ ಅಜ್ಜೂರನ ಮಗ ಯಾಜನ್ಯ, ಬೆನಾಯನ ಮಗ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.