ಆದುದರಿಂದ ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ ಮಾತ್ಸರ್ಯಕ್ಕೂ ನಾನು ನಿನಗೆ ಪ್ರತೀಕಾರಮಾಡುವೆನು; ನಿನ್ನನ್ನು ದಂಡಿಸುವಾಗ ನಾನು ಅವರಿಗೆ ಗೋಚರವಾಗುವೆನು. ಇದು ಸರ್ವೇಶ್ವರನಾದ ದೇವರ ನುಡಿ.