ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನರಪುತ್ರನೇ, ಎಲ್ಲ ಬಗೆಯ ಪಕ್ಷಿಗಳಿಗೂ ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ: ನೀವು ಕೂಡಿಬನ್ನಿ; ನಾನು ಇಸ್ರಯೇಲಿನ ಪರ್ವತಗಳ ಮೇಲೆ ನಿಮಗಾಗಿ ಮಾಡುವ ಮಹಾಯಜ್ಞಕ್ಕೆ ಎಲ್ಲ ಕಡೆಯಿಂದಲೂ ನೆರೆದುಬಂದು ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.