ಆಗ ಅವನು ನನಗೆ, “ಯಾಜಕರು ಹವಿಸ್ಸನ್ನು ಹೊರಗಣ ಪ್ರಾಕಾರಕ್ಕೆ ಒಯ್ದು ಜನರನ್ನು ಶುದ್ಧಿಮಾಡದ ಹಾಗೆ, ಪ್ರಾಯಶ್ಚಿತ್ತ ಬಲಿಪಶುವಿನ ಮತ್ತು ದೋಷಪರಿಹಾರಕ ಬಲಿಪಶುವಿನ ಮಾಂಸವನ್ನು ಬೇಯಿಸುವುದಕ್ಕೂ ಧಾನ್ಯನೈವೇದ್ಯವನ್ನು ಪಕ್ವಮಾಡುವುದಕ್ಕೂ ಈ ಸ್ಥಳ ಏರ್ಪಟ್ಟಿದೆ,” ಎಂದು ಹೇಳಿದನು.