ಆದರೆ ದಾನಿಯೇಲನು ತಾನು ರಾಜನ ಭೋಜನ ಪದಾರ್ಥಗಳನ್ನು ತಿಂದು ಹಾಗೂ ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನೇ ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿಕೊಂಡನು. ಕಂಚುಕಿಯರ ನಾಯಕನಿಗೆ, “ಕ್ಷಮಿಸು, ನಾನು ಅಶುದ್ಧನಾಗಲಾರೆ,” ಎಂದು ವಿನಂತಿಸಿದನು.