ಹೀಗಿರಲು ದೇವರು ಆ ನಾಲ್ಕುಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲೂ ವಿದ್ಯೆಗಳಲ್ಲೂ ಜ್ಞಾನ ವಿವೇಕಗಳನ್ನು ದಯಪಾಲಿಸಿದರು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಅರ್ಥೈಸುವುದರಲ್ಲಿ ಪ್ರವೀಣನಾದನು.