ರಾಜನೂ ಅವನ ಸಾಮಂತರೂ ಆಡಿದ ಮಾತು ರಾಣಿಗೆ ಮುಟ್ಟಿತು. ಆಕೆ ಔತಣ ಶಾಲೆಗೆ ಬಂದು, “ರಾಜರೇ, ಚಿರಂಜೀವಿಯಾಗಿರಿ! ನಿಮ್ಮ ಮನಸ್ಸು ಕಳವಳಗೊಳ್ಳದಿರಲಿ, ನಿಮ್ಮ ಮುಖ ಕಳೆಗುಂದದಿರಲಿ! ಪರಿಶುದ್ಧ ದೇವರ ಆತ್ಮ ನೆಲೆಸಿರುವ ಒಬ್ಬ ವ್ಯಕ್ತಿ ನಿಮ್ಮ ರಾಜ್ಯದಲ್ಲಿದ್ದಾನೆ.