ಈ ಕಾರಣ ರಾಜನು ಅಪ್ಪಣೆ ಕೊಡಲೇಬೇಕಾಯಿತು. ಕೂಡಲೆ ಅವರು ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಯೇಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ದಿನನಿತ್ಯವೂ ಆರಾಧಿಸುವ ದೇವರು ನಿನ್ನನ್ನು ಉದ್ಧರಿಸಲಿ!” ಎಂದು ಹರಸಿದನು.