ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ಮಡದಿಮಕ್ಕಳ ಸಮೇತ ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ ಅವರ ಎಲುಬುಗಳನ್ನೆಲ್ಲ ಚೂರುಚೂರು ಮಾಡಿದವು.