ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.