ಉತ್ತರರಾಜನು ಬಂದು, ಮುತ್ತಿಗೆಹಾಕಿ, ಕೋಟೆಕೊತ್ತಲದ ನಗರವನ್ನು ಹಿಡಿಯುವನು. ದಕ್ಷಿಣದ ಭುಜಬಲವು ಅವನನ್ನು ನಿಲ್ಲಿಸಲಾರದು. ಅಲ್ಲಿನ ಮಹಾವೀರರು ತಡೆಯಲಾರರು. ಎದುರಿಸುವ ಯಾವ ಶಕ್ತಿಯೂ ಇರದು.