ಆ ದೂತ ಎಡಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಯುಗ, ಎರಡು ಯುಗ, ಮತ್ತು ಅರ್ಧ ಯುಗ ಕಳೆಯಬೇಕು. ದೇವಜನರಿಗಾಗುವ ಹಿಂಸೆಬಾಧೆಗಳು ಸಂಪೂರ್ಣವಾಗಿ ನಿಂತಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.