ಅವರದು ವಂಚನೆಯ ಮನಸ್ಸು. ಈಗ ಅವರು ತಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ಅನುಭವಿಸಲೇಬೇಕು. ಸರ್ವೇಶ್ವರಸ್ವಾಮಿ ಅವರ ಯಜ್ಞವೇದಿಗಳನ್ನು ಕೆಡವುವರು. ಅವರ ಪೂಜಾಸ್ತಂಭಗಳನ್ನು ಒಡೆದುಹಾಕುವರು.