ಈಗ ಎಫ್ರಯಿಮರ ಪಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರು ಬೆಳ್ಳಿಬಂಗಾರವನ್ನು ಕರಗಿಸಿ ಇಷ್ಟಬಂದಂತೆ ಬೊಂಬೆಗಳನ್ನು ಮಾಡಿಕೊಂಡಿದ್ದಾರೆ. ಅವೆಲ್ಲವು ಶಿಲ್ಪಿಗಳ ಕೈಕೆಲಸವೇ ಹೊರತು ಮತ್ತೇನು ಅಲ್ಲ. ಇಂಥ ವಿಗ್ರಹಗಳನ್ನು ಪೂಜೆಗಾಗಿ ಪ್ರತಿಷ್ಠಾಪನೆಮಾಡುತ್ತಾರೆ. ಬುದ್ಧಿಜೀವಿಗಳಾದ ಇವರು ಬಸವನಿಗೆ ಮುದ್ದಿಡುತ್ತಾರೆ.
Go to Home Page