ಸರ್ವೇಶ್ವರ ಇಂತೆನ್ನುತ್ತಾರೆ: ದಮಸ್ಕದ ಜನರು ಪದೇಪದೇ ಮಾಡಿರುವ ದ್ರೋಹಗಳಿಗಾಗಿ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.