ಸರ್ವೇಶ್ವರ ಇಂತೆನ್ನುತ್ತಾರೆ: “ಟೈರ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಸೋದರಪ್ರೇಮದ ಒಡಂಬಡಿಕೆಯನ್ನು ಅವರು ಮರೆತುಬಿಟ್ಟರು. ಅವರು ಇಡೀ ರಾಷ್ಟ್ರವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.