ಸರ್ವೇಶ್ವರ ಇಂತೆನ್ನುತ್ತಾರೆ: “ಮೋವಾಬಿನ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣಮಾಡಿದ್ದಾರೆ.