ಓಬದ್ಯನು ಕಂಡ ದೈವದರ್ಶನ: ಎದೋಮ್ ನಾಡಿನ ವಿಷಯವಾಗಿ ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಹೊರಡಿರಿ, ಎದೋಮಿನ ಮೇಲೆ ಯುದ್ಧಮಾಡಲು ತೆರಳೋಣ” ಹೀಗೆಂದು ತಮ್ಮ ದೂತನ ಮುಖಾಂತರ ಸರ್ವೇಶ್ವರ ರಾಷ್ಟ್ರಗಳಿಗೆ ಹೇಳಿಕಳುಹಿಸಿದ್ದಾರೆ. ಅವರಿಂದ ಬಂದ ಈ ಸಮಾಚಾರವನ್ನು ನಾವು ಕೇಳಿದ್ದೇವೆ.