“ಆ ದಿನದಲ್ಲಿ ಜೆರುಸಲೇಮಿನಲ್ಲಿರುವ ಮೀನುಬಾಗಿಲಿನ ಬಳಿ ಕೂಗಾಟವನ್ನು, ಪಟ್ಟಣದ ಹೊಸ ಬಡಾವಣೆಯಲ್ಲಿ ಗೋಳಾಟವನ್ನು, ಹಾಗೂ ಬೆಟ್ಟಗುಡ್ಡಗಳಲ್ಲಿ ಭೀಕರ ಗದ್ದಲವನ್ನು ಕೇಳುವಿರಿ. ಇದು ಸರ್ವೇಶ್ವರಸ್ವಾಮಿಯ ನುಡಿ.