ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.