ಸರ್ವೇಶ್ವರ ತಮ್ಮ ಜನರಿಗೆ ಇಂತೆನ್ನುತ್ತಾರೆ: “ಚತುರ್ದಿಕ್ಕುಗಳಿಗೆ ನಿಮ್ಮನ್ನು ಚದರಿಸಿದವನು ನಾನೇ. ಆದರೆ ಈಗ ಎಚ್ಚೆತ್ತುಕೊಳ್ಳಿ, ಹೊರನಾಡುಗಳಿಂದ ಓಡಿಬನ್ನಿ, ಇದು ಸರ್ವೇಶ್ವರನ ನುಡಿ. ಬಾಬಿಲೋನಿಗೆ ಸೆರೆಹೋದ ಸಿಯೋನಿನವರೇ, ಅಲ್ಲಿಂದ ತಪ್ಪಿಸಿಕೊಂಡು ಬನ್ನಿ.