ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು.