ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ನಾನು ಶಾಪವನ್ನು ಕಳುಹಿಸುತ್ತೇನೆ. ಅದು ಕಳ್ಳನ ಮನೆಯನ್ನೂ ನನ್ನ ಹೆಸರೆತ್ತಿ ಸುಳ್ಳಾಣೆಯಿಡುವವನ ಮನೆಯನ್ನೂ ಹೊಕ್ಕು, ಅಲ್ಲಿ ತಂಗಿದ್ದು ಅದನ್ನು ಕಲ್ಲುಮರ ಸಹಿತ ಸಂಪೂರ್ಣವಾಗಿ ಭಸ್ಮಮಾಡುವುದು,” ಎಂದನು.