ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.