ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು.