“ಮೂವತ್ತು ಬೆಳ್ಳಿ ನಾಣ್ಯಗಳನ್ನೆತ್ತಿ ಸರ್ವೇಶ್ವರಸ್ವಾಮಿ ನನಗಿತ್ತ ಆದೇಶದಂತೆ ‘ಕುಂಬಾರನ ಹೊಲ’ ಕೊಳ್ಳಲು ಅದನ್ನು ತೆತ್ತರು. ಅಮೂಲ್ಯ ವ್ಯಕ್ತಿಗೆ ಕಟ್ಟಿದ ಬೆಲೆಯದು, ಇಸ್ರಯೇಲ ಜನರು ಒಪ್ಪಿದ ಮೊತ್ತವದು,” ಎಂದು ವಚನಿಸಿದ ಪ್ರವಾದಿ ಯೆರೆಮೀಯನ ಮಾತುಗಳು ಈಡೇರಿದವು.