ಕಾರಣ, ತಮ್ಮ ಶಿಷ್ಯರಿಗೆ ಪ್ರಬೋಧಿಸುವುದರಲ್ಲಿ ಅವರು ನಿರತರಾಗಿದ್ದರು. “ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು. ಅವರು ಆತನನ್ನು ಕೊಲ್ಲುವರು. ಕೊಂದ ಮೂರನೆಯ ದಿನ ಆತನು ಪುನರುತ್ಥಾನ ಹೊಂದುವನು,” ಎಂದು ಯೇಸು ಅವರಿಗೆ ತಿಳಿಸಿದರು.