ಇದನ್ನು ಯಾರಿಗೂ ಹೇಳಕೂಡದು ಎಂದು ಯೇಸು ಅವನನ್ನು ಎಚ್ಚರಿಸಿ, “ನೀನು ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ; ನಂತರ ಮೋಶೆ ನಿಯಮಿಸಿರುವ ಪ್ರಕಾರ ನೀನು ಗುಣಹೊಂದಿದ್ದಕ್ಕಾಗಿ ಶುದ್ಧೀಕರಣ ವಿಧಿಯನ್ನು ಅನುಸರಿಸು; ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.