ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.