ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಅವರು ಯೇಸುವನ್ನು ಎದುರುಗೊಳ್ಳಲು ಹೊರಟರು. ‘ಸರ್ವೇಶ್ವರನ ನಾಮದಲ್ಲಿ ಬರುವಾತನಿಗೆ ಜಯಜಯವಾಗಲಿ ! ಇಸ್ರಯೇಲಿನ ಅರಸನಿಗೆ ಶುಭವಾಗಲಿ !’ ಎಂದು ಘೋಷಿಸುತ್ತಾ ಅವರನ್ನು ಸ್ವಾಗತಿಸಿದರು.