ಪೇತ್ರನನ್ನು ಬಂಧಿಸಿದ ಮೇಲೆ ಸೆರೆಮನೆಯಲ್ಲಿಟ್ಟು ಅವನನ್ನು ಕಾಯಲು ನಾಲ್ಕು ನಾಲ್ಕು ಸೈನಿಕರಿದ್ದ ಚತುರ್ದಳಕ್ಕೆ ವಹಿಸಿದನು. ಪಾಸ್ಕಹಬ್ಬದ ನಂತರ ಪೇತ್ರನನ್ನು ಬಹಿರಂಗ ವಿಚಾರಣೆಗೆ ಗುರಿಪಡಿಸಲು ಉದ್ದೇಶಿಸಿದ್ದನು.