ಆದರೆ ಅವರಲ್ಲಿ ಕೆಲವರು ಹಠಮಾರಿಗಳು; ಅವರು ವಿಶ್ವಾಸವನ್ನು ನಿರಾಕರಿಸಿದ್ದೂ ಅಲ್ಲದೆ ಈ ಹೊಸಮಾರ್ಗವನ್ನು ಸಭೆಯ ಮುಂದೆ ದೂಷಿಸತೊಡಗಿದರು. ಈ ಕಾರಣ ಪೌಲನು ಅವರನ್ನು ಬಿಟ್ಟು ಶಿಷ್ಯರನ್ನು ಕರೆದುಕೊಂಡು ತುರಾನ್ನ ಎಂಬವನ ತರ್ಕಶಾಲೆಯಲ್ಲಿ ಪ್ರತಿದಿನವೂ ಚರ್ಚೆ ನಡೆಸುತ್ತಾ ಬಂದನು.