ಪೌಲನನ್ನು ಕರೆದುತಂದು ನಿಲ್ಲಿಸಿದಾಗ ತೆರ್ತುಲ್ಲನು ಅವನ ವಿರುದ್ಧ ಹೀಗೆಂದು ವಾದಿಸಲಾರಂಭಿಸಿದನು: “ಮಹಾಪ್ರಭುವೇ, ನಿಮ್ಮ ಮುಖಂಡತ್ವದಲ್ಲಿ ನಾವು ಶಾಂತಿ ಸೌಭಾಗ್ಯವನ್ನು ಸವಿಯುತ್ತಿದ್ದೇವೆ. ದೇಶ ಪ್ರಗತಿಗಾಗಿ ಆಗುತ್ತಿರುವ ಸುಧಾರಣೆಗಳಿಗೆ ತಮ್ಮ ಪರಾಮರಿಕೆಯೇ ಕಾರಣ.